ಗಾಂಧಿ ಪಾರ್ಕ್ ಅಭಿವೃದ್ಧಿಗೆ ಶಾಸಕರ ಕಟ್ಟುನಿಟ್ಟಿನ ಸೂಚನೆ
ಗಾಂಧಿ ಪಾರ್ಕ್ ಅಭಿವೃದ್ಧಿಗೆ ಶಾಸಕರ ಕಟ್ಟುನಿಟ್ಟಿನ ಸೂಚನೆ ಶಿವಮೊಗ್ಗ ನಗರದ ಗಾಂಧಿ ಪಾರ್ಕ್ನ ಮೂಲಸೌಕರ್ಯಗಳ ಸುಧಾರಣೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಶಾಸಕ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಾಸಕರು ಪಾರ್ಕ್ಗೆ ಭೇಟಿ ನೀಡಿ, ಫೌಂಟೆನ್, ಈಜುಕೊಳ, ಮಕ್ಕಳ ರೈಲು ಹಾಗೂ ಆಟಿಕೆಗಳ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಸೂಚಿಸಿದರು. ಈಜುಕೊಳವನ್ನು ಸಾರ್ವಜನಿಕರ ಬಳಕೆಗೆ ತರಲು , ಮಕ್ಕಳ ರೈಲು ದುರಸ್ತಿಗೊಳಿಸಲು ಹಾಗೂ ಪಾರ್ಕ್ನ ಕೊಳವನ್ನು ಅಭಿವೃದ್ಧಿಪಡಿಸಲು ನಿರ್ದೇಶನ ನೀಡಿದರು. ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ವರದಿ ನದೀಮ್ ಕೆ ಮ್