ಬರದ ನಡುವೆ ಶಿವಮೊಗ್ಗಕ್ಕೆ ಬಿಗ್ ರಿಲೀಫ್! ರೈತರಿಗೆ ನೀರು, ಜನರಿಗೆ ಕುಡಿಯುವ ನೀರು, ಗ್ರಾಮೀಣರಿಗೆ ಉದ್ಯೋಗ
ಬರ ಪರಿಸ್ಥಿತಿ ನಿರ್ವಹಣೆಗೆ ಸಚಿವ ಮಧು ಬಂಗಾರಪ್ಪ ಮಹತ್ವದ ಸೂಚನೆ ಗ್ರಾಮೀಣ ಭಾಗದ ಜನರಿಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚಿನ ಉದ್ಯೋಗ, ಕುಡಿಯುವ ನೀರು ಹಾಗೂ ರೈತರ ಹಿತರಕ್ಷಣೆಗೆ ಆದ್ಯತೆ ಶಿವಮೊಗ್ಗ, ಆಗಸ್ಟ್ 8: ಜಿಲ್ಲೆಯಲ್ಲಿ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚಿನ ಉದ್ಯೋಗ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಶಿವಮೊಗ್ಗ ಜಿಲ್ಲಾಡಳಿತ ಕಚೇರಿಯಲ್ಲಿ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ತಾಲೂಕುಗಳ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು ಮಾತನಾಡಿದರು. ಬರ ಪರಿಸ್ಥಿತಿಯಿಂದ ಗ್ರಾಮೀಣ ಭಾಗದ ಜನರು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಹೆಚ್ಚಿನ ಪ್ರಮಾಣದಲ್ಲಿ ಕೆಲಸಗಳನ್ನು ಕೈಗೆತ್ತಿಕೊಳ್ಳಬೇಕು. ಯೋಜನೆಯ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ವ್ಯಾಪಕ ಅರಿವು ಮೂಡಿಸಬೇಕು. ಗ್ರಾಮಸಭೆ, ಪಿಡಿಒಗಳ ಮೂಲಕ ಹಾಗೂ ಕರಪತ್ರಗಳ ಮೂಲಕ ಯೋಜನೆಯ ಮಾಹಿತಿ ಜನರಿಗೆ ತಲುಪಿಸುವಂತೆ ಸಚಿವರು ಸೂಚಿಸಿದರು. ರಾಜ್ಯದ ಟಾಪ್ 5ರಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಿಇಒ ಎನ್. ಹೇಮಂತ್ ಮಾತನಾಡಿ, ಜಿಲ್ಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಜುಲೈ 1ರಿಂದ ಜಾರಿಯಲ್ಲಿದ್ದು, ಪ್ರ...